Monday, December 29, 2008

ಹಕ್ಕಿ ಗೂಡು ಮರೆತು ಹಾರಿದಾಗ...

ವಲಸೆ ಹಕ್ಕಿ ಸಮಯ ಬಂದಾಗ ತನ್ನ ಪಾಡಿಗೆ ತಾನು ಹಾರಿ ಹೋಗುತ್ತದೆ... ಆದರೆ ಹಕ್ಕಿಯ ಗೂಡು ಮಾತ್ರ ಮತ್ತೆಂದಾದರೂ ಹಕ್ಕಿ ಮರಳುವುದೆಂಬ ಆಸೆಯಲ್ಲಿ ಕಾಯುತ್ತದೆ...
--------
ಗೂಡು ನಿರ್ಜೀವ. ಅದಕ್ಕೆ ಹಾರಲಾಗದು.
--------
ಹಾರಲಾಗದ್ದೆಲ್ಲಾ ನಿರ್ಜೀವವಲ್ಲ... ಹಕ್ಕಿಯೇ ಶ್ರದ್ಧೆಯಿಂದ ಕಟ್ಟಿದ ಗೂಡದು, ಬೇಕಾದಾಗ ಬೆಚ್ಚನೆಯ ಮನೆಯಾಗಿತ್ತು... ಹಕ್ಕಿಗೆ ಎಷ್ಟು ಗೂಡೋ? ಆದರೆ ಗೂಡಿಗೆ ಅದೊಂದೇ ಹಕ್ಕಿ...!
--------
ಹಕ್ಕಿಯೇ ಕಟ್ಟಿದ್ದು ಗೂಡನ್ನ!
--------
ಹೌದು, ಹಕ್ಕಿಯೇ ಕಟ್ಟಿದ್ದು ಗೂಡನ್ನ! ಮತ್ತೆ ಬರೋದಿಲ್ಲ ಅಂತ ಗೊತ್ತಿದ್ಮೇಲೆ ಕಟ್ಬೇಕು ಯಾಕೆ?
--------
ಹಕ್ಕಿಗೆ ಬಯಲಲ್ಲಿ ಮಲಗಲಾಗದು! ಮನೆ ಬೇಕು, ಅದರ ಶ್ರಮ, ಅದರ ಆಸಕ್ತಿ, ಗೂಡು ಕಟ್ಟಿತು.
--------
ಬಯಲಲ್ಲಿ ಮಲಗಲಾಗದಿದ್ದ ಮೇಲೂ ಬಯಲಿನ ಮೋಹ ಹಕ್ಕಿಯನ್ನು ಬಿಡಲಿಲ್ಲ... ಈಗೇನೋ ಇರುವುದೆಲ್ಲವ ಬಿಟ್ಟು ಹಾರಿಹೋಗಿದೆ ಹಕ್ಕಿ, ಎಷ್ಟಂದರೂ ವಲಸೆ ಹಕ್ಕಿ, ಮರಳಿ ಬಂದೀತು ಒಂದು ದಿನ, ಆಗ ಗೂಡಿರದು, ಮತ್ತೆ ಹೊಸ ಗೂಡು ಕಟ್ಟುವ ಸಂಭ್ರಮದ ಹಕ್ಕಿಗೆ ಗೂಡಿನ ನೆನಪೂ ಇರದು!
----------
ಅದು ಜೀವನ ಚಕ್ರ...
----------

Friday, December 12, 2008

......


ಮೊಗತುಂಬಿದ ಗತ್ತು ಕರಗಿಸಿ
ನಗುವಿನ ಮುಖವಾಡ ಸರಿಸುತ್ತ
ಖಾಲಿಖಾಲಿಯ ಹೊತ್ತುಬರುವ
ನೀಲಿನೀಲಿಯ ಈ ಹೊತ್ತು
ನೀ ನನ್ನೊಡನಿರಬೇಕಿತ್ತು...

ನಾನಲ್ಲದ ನಾನು
ನನ್ನಿಂದ ಹೊರಬಂದು
ನಾನು ನಾನಾಗುವ ಹೊತ್ತು
ನೀ ನನ್ನೊಡನಿರಬೇಕಿತ್ತು...

ಮನತುಂಬಿದ ಸೊನ್ನೆಗೆ ಅರಿವಿದೆ
ಕಣ್ಣಂಚಲರಳಿದ ಹನಿಗೆ ಅನಿಸಿದೆ
ಸೋಗಲಾಡಿ ನಗುವಿಗೂ ಬೇಕಿದೆ

ನೀನಿದ್ದರೆ ಚೆನ್ನಾಗಿತ್ತು...
ನೀನಿರಬೇಕಿತ್ತು...

ನೀ ನನ್ನೊಡನಿರಬೇಕಿತ್ತು...

Wednesday, December 3, 2008

ನಾವು ಮರೆತ ಪ್ರತಿಜ್ಞೆ...

GENERAL PLEDGE

India is my country. All Indians are my brothers and sisters. I Love my country. I am proud of its rich and varied culture. I shall always strive to be worthy of it. I shall love and respect my parents, teachers and elders. To my country and my people I pledge my devotion. In their well being and prosperity alone lies my happiness.

NATIONAL INTEGRATION PLEDGE
I solemnly pledge to work with dedication to preserve and strengthen the freedom and integrity of the nation. I further affirm that I shall never resort to violence and that all differences and disputes relating to religion, language, region or other political or economic grievances should be settled by peaceful and constitutional means.

ಚಿಕ್ಕಂದಿನಲ್ಲಿ ಶಾಲೆಯಲ್ಲಿ ಕಲಿತಿದ್ದು

ಭಾರತವು ನನ್ನ ದೇಶ. ಭಾರತೀಯರೆಲ್ಲರೂ ನನ್ನ ಸಹೋದರ ಸಹೋದರಿಯರು. ನಾನು ನನ್ನ ದೇಶವನ್ನು ಪ್ರೀತಿಸುತ್ತೇನೆ. ಅದರ ಸಂಪನ್ನ ಹಾಗೂ ವೈವಿಧ್ಯಪೂರ್ಣ ಪರಂಪರೆಗೆ ನಾನು ಹೆಮ್ಮೆ ಪಡುತ್ತೇನೆ. ಅದಕ್ಕೆ ಅರ್ಹನಾಗಲು ನಾನು ಸದಾ ಪ್ರಯತ್ನಿಸುತ್ತೇನೆ. ನಾನು ನನ್ನ ತಂದೆತಾಯಿ ಮತ್ತು ಗುರುಹಿರಿಯರನ್ನು ಗೌರವಿಸುತ್ತೇನೆ ಹಾಗೂ ಅವರೊಡನೆ ಸೌಜನ್ಯದಿಂದ ವರ್ತಿಸುತ್ತೇನೆ. ನಾನು ನನ್ನ ದೇಶ ಮತ್ತು ಜನರಿಗೆ ನನ್ನ ಶ್ರದ್ಧೆಯನ್ನು ಮುಡಿಪಾಗಿಡುತ್ತೇನೆ. ಅವರ ಕ್ಷೇಮ ಮತ್ತು ಸಮೃದ್ಧಿಯಲ್ಲೇ ನನ್ನ ಆನಂದವಿದೆ.

ನಾವೆಲ್ಲ ಚಿಕ್ಕವರಿರುವಾಗ, ನಾ ಕಲಿತ ಕೇರಳದ ಕಾಸರಗೋಡಿನಲ್ಲಿರುವ ಸರಕಾರಿ ಶಾಲೆಯಲ್ಲಿ ದಿನವೂ ಬೆಳಿಗ್ಗೆ ಪ್ರತಿಜ್ಞೆ ಮತ್ತು ಪ್ರಾರ್ಥನೆಗಳ ನಂತರವೇ ಪಾಠಗಳು ಆರಂಭವಾಗುತ್ತಿದ್ದವು. ಕರ್ನಾಟಕದಲ್ಲೂ ಹಾಗೆಯೇ ಇತ್ತಾ? ಈಗಲೂ ಈ ಪದ್ಧತಿ ಇದೆಯಾ? ಬೇರೆ ರಾಜ್ಯಗಳಲ್ಲಿ ಕೂಡ ಪ್ರತಿಜ್ಞೆ ಬೋಧಿಸುವ ಪದ್ಧತಿ ಇದೆಯಾ? ನೀವೆಲ್ಲಾ ನನ್ನ ಹಾಗೆ ದಿನವೂ ಪ್ರತಿಜ್ಞೆ ಮಾಡಿಕೊಂಡೇ ಬೆಳೆದವರಾ? :-)

ಗೊತ್ತಿದ್ದವರಿಂದ ಉತ್ತರದ ನಿರೀಕ್ಷೆಯಲ್ಲಿದ್ದೇನೆ.